Jurisprudence of Acts of Worship

Jurisprudence of Acts of Worship

6- ಉಸ್ಮಾನ್ ಬಿನ್ ಅಫ್ಫಾನ್ ರವರ ವಿಮೋಚಿತ ಗುಲಾಮರಾದ ಹುಮ್ರಾನ್ ರಿಂದ ವರದಿ: ಒಮ್ಮೆ ಉಸ್ಮಾನ್ ಬಿನ್ ಅಫ್ಫಾನ್ ವುದೂ ನಿರ್ವಹಿಸಲು ನೀರು ತರಿಸುವುದನ್ನು ಅವರು ಕಂಡರು. ಅವರು (ಉಸ್ಮಾನ್) ಪಾತ್ರೆಯಿಂದ ತಮ್ಮ ಎರಡು ಕೈಗಳಿಗೆ ನೀರು ಸುರಿದು, ಅವುಗಳನ್ನು ಮೂರು ಬಾರಿ ತೊಳೆದರು. ನಂತರ ಬಲಗೈಯನ್ನು ನೀರಿಗೆ ತೂರಿಸಿದರು. ನಂತರ ಬಾಯಿ ಮುಕ್ಕಳಿಸಿ ಮೂಗಿಗೆ ನೀರೆಳೆದು ಹೊರಬಿಟ್ಟರು. ನಂತರ ಮೂರು ಬಾರಿ ಮುಖವನ್ನು ತೊಳೆದರು. ಮೊಣಕೈಗಳ ವರೆಗೆ ಎರಡು ಕೈಗಳನ್ನು ಮೂರು ಬಾರಿ ತೊಳೆದರು. ನಂತರ ತಲೆಯನ್ನು ಸವರಿದರು. ನಂತರ ಎರಡು ಕಾಲುಗಳನ್ನು ಮೂರು ಬಾರಿ ತೊಳೆದರು. ನಂತರ ಹೇಳಿದರು: "ನಾನಿಲ್ಲಿ ವುದೂ ನಿರ್ವಹಿಸಿದಂತೆ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ವುದೂ ನಿರ್ವಹಿಸುವುದನ್ನು ನಾನು ಕಂಡಿದ್ದೇನೆ." ಅವರು (ಪ್ರವಾದಿಯವರು) ಹೇಳಿದರು: "@ಯಾರು ನಾನಿಲ್ಲಿ ವುದೂ ನಿರ್ವಹಿಸಿದಂತೆ ವುದೂ ನಿರ್ವಹಿಸಿ, ಇಹಲೋಕದ ಯಾವುದೇ ವಿಷಯದ ಬಗ್ಗೆ ಏನೂ ಯೋಚಿಸದೆ ಎರಡು ರಕಅತ್ ನಮಾಝ್ ನಿರ್ವಹಿಸುತ್ತಾರೋ ಅವರ ಗತ ಪಾಪಗಳನ್ನು ಅಲ್ಲಾಹು ಕ್ಷಮಿಸುತ್ತಾನೆ.*"

18- ಇಬ್ನ್ ಝುಬೈರ್ ಪ್ರತಿಯೊಂದು ನಮಾಝ್‌ನಲ್ಲೂ ಸಲಾಂ ಹೇಳಿದ ನಂತರ ಇದನ್ನು ಪಠಿಸುತ್ತಿದ್ದರು: "ಲಾ ಇಲಾಹ ಇಲ್ಲಲ್ಲಾಹು ವಹ್ದಹೂ ಲಾ ಶರೀಕ ಲಹೂ, ಲಹುಲ್ ಮುಲ್ಕು ವಲಹುಲ್ ಹಮ್ದು ವಹುವ ಅಲಾ ಕುಲ್ಲಿ ಶೈಇನ್ ಕದೀರ್. ಲಾ ಹೌಲ ವಲಾ ಕುವ್ವತ ಇಲ್ಲಾ ಬಿಲ್ಲಾಹ್. ಲಾ ಇಲಾಹ ಇಲ್ಲಲ್ಲಾಹು, ವಲಾ ನಅ್‌ಬುದು ಇಲ್ಲಾ ಇಯ್ಯಾಹು, ಲಹು ನ್ನಿಅ್‌‌ಮತು ವಲಹುಲ್ ಫದ್ಲು, ವಲಹು ಸ್ಸನಾಉಲ್ ಹಸನು, ಲಾ ಇಲಾಹ ಇಲ್ಲಲ್ಲಾಹು ಮುಖ್ಲಿಸೀನ ಲಹು ದ್ದೀನ ವಲವ್ ಕರಿಹಲ್ ಕಾಫಿರೂನ್." (ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ, ಅವನು ಏಕೈಕನು ಮತ್ತು ಸಹಭಾಗಿಗಳಿಲ್ಲದವನು, ಆಧಿಪತ್ಯವು ಅವನದ್ದು ಮತ್ತು ಸ್ತುತಿಯು ಅವನಿಗೆ, ಅವನು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ. ಅಲ್ಲಾಹನ ಹೊರತು ಶಕ್ತಿಯಾಗಲಿ ಸಾಮರ್ಥ್ಯವಾಗಲಿ ಇಲ್ಲ. ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ, ನಾವು ಅವನನ್ನಲ್ಲದೆ ಇನ್ನಾರನ್ನೂ ಆರಾಧಿಸುವುದಿಲ್ಲ. ಅನುಗ್ರಹವು ಅವನದ್ದು, ಔದಾರ್ಯವು ಅವನದ್ದು ಮತ್ತು ಉತ್ತಮವಾದ ಪ್ರಶಂಸೆಯು ಅವನಿಗೆ. ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ, ಸತ್ಯನಿಷೇಧಿಗಳು ಅಸಹ್ಯಪಟ್ಟರೂ ಸಹ ನಾವು ಧರ್ಮವನ್ನು ಅವನಿಗೆ ನಿಷ್ಕಳಂಕಗೊಳಿಸುತ್ತೇವೆ). ನಂತರ ಅವರು ಹೇಳಿದರು: "@ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎಲ್ಲಾ ನಮಾಝ್‌ಗಳ ನಂತರ ಇವುಗಳ ಮೂಲಕ ತಹ್ಲೀಲ್ (ಲಾಇಲಾಹ ಇಲ್ಲಲ್ಲಾಹ್) ಪಠಿಸುತ್ತಿದ್ದರು."

23- ಒಮ್ಮೆ ಉಮ್ಮು ಸಲಮ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ಅಬಿಸೀನಿಯಾದಲ್ಲಿ ನೋಡಿದ ಮಾರಿಯ ಎಂಬ ಹೆಸರಿನ ಇಗರ್ಜಿಯ ಬಗ್ಗೆ ಮತ್ತು ಅದರಲ್ಲಿ ಅವರು ನೋಡಿದ ಚಿತ್ರಗಳ ಬಗ್ಗೆ ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಗಮನ ಸೆಳೆದಾಗ, ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "@ಅವರು ಎಂತಹ ಜನರೆಂದರೆ, ಅವರಲ್ಲಿ ಒಬ್ಬ ನೀತಿವಂತ ದಾಸ ಅಥವಾ ಒಬ್ಬ ನೀತಿವಂತ ವ್ಯಕ್ತಿ ಮರಣಹೊಂದಿದರೆ, ಅವರು ಅವನ ಸಮಾಧಿಯ ಮೇಲೆ ಆರಾಧನಾಲಯವನ್ನು ನಿರ್ಮಿಸುತ್ತಿದ್ದರು* ಮತ್ತು ಅದರಲ್ಲಿ ಆ ಚಿತ್ರಗಳನ್ನು ರಚಿಸುತ್ತಿದ್ದರು. ಅವರು ಅಲ್ಲಾಹನ ದೃಷ್ಟಿಯಲ್ಲಿ ಸೃಷ್ಟಿಗಳಲ್ಲೇ ಅತ್ಯಂತ ನಿಕೃಷ್ಟರು."

26- ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಾಝ್ ಮುಗಿಸಿದರೆ ಮೂರು ಬಾರಿ ಇಸ್ತಿಗ್ಫಾರ್ (ಕ್ಷಮೆಯಾಚನೆ) ಮಾಡುತ್ತಿದ್ದರು. ನಂತರ ಹೀಗೆ ಹೇಳುತ್ತಿದ್ದರು: "@ಅಲ್ಲಾಹುಮ್ಮ ಅನ್ತ ಸ್ಸಲಾಂ, ವಮಿನ್ಕ ಸ್ಸಲಾಂ, ತಬಾರಕ್ತ ದಲ್ ಜಲಾಲಿ ವಲ್ ಇಕ್ರಾಮ್*" (ಓ ಅಲ್ಲಾಹ್! ನೀನು ಅಸ್ಸಲಾಂ (ಶಾಂತಿ) ಮತ್ತು ನಿನ್ನಿಂದಲೇ ಶಾಂತಿ. ಓ ಮಹಿಮೆ ಪ್ರತಿಷ್ಠೆಗಳನ್ನು ಹೊಂದಿರುವವನೇ! ನೀನು ಅನುಗ್ರಹಪೂರ್ಣನಾಗಿರುವೆ.” (ವರದಿಗಾರರಲ್ಲಿ ಒಬ್ಬರಾದ) ವಲೀದ್ ಹೇಳುತ್ತಾರೆ: ನಾನು ಔಝಾಈರೊಡನೆ ಕೇಳಿದೆ: "ನಾನು ಕ್ಷಮೆಯಾಚನೆ ಮಾಡುವುದು ಹೇಗೆ?" ಅವರು ಉತ್ತರಿಸಿದರು: "ಅಸ್ತಗ್ಫಿರುಲ್ಲಾಹ್, ಅಸ್ತಗ್ಫಿರುಲ್ಲಾಹ್ ಎಂದು ಹೇಳುವುದು."

31- ಒಬ್ಬ ವ್ಯಕ್ತಿ ಅಲ್ಲಾಹನ ಸಂದೇಶವಾಹಕರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು: "@ನಾನು ಐದು ವೇಳೆಯ ಕಡ್ಡಾಯ ನಮಾಝ್‌ಗಳನ್ನು ನಿರ್ವಹಿಸಿದರೆ, ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸಿದರೆ, ಧರ್ಮಸಮ್ಮತವಾಗಿರುವುದನ್ನು ಧರ್ಮಸಮ್ಮತವೆಂದು ಮತ್ತು ಧರ್ಮನಿಷಿದ್ಧವಾಗಿರುವುದನ್ನು ಧರ್ಮನಿಷಿದ್ಧವೆಂದು ಪರಿಗಣಿಸಿದರೆ*, ಮತ್ತು ಇವುಗಳಿಗಿಂತ ಹೆಚ್ಚು ಏನೂ ನಿರ್ವಹಿಸದಿದ್ದರೆ, ನಾನು ಸ್ವರ್ಗಕ್ಕೆ ಹೋಗುವೆನೇ?" ಅವರು ಉತ್ತರಿಸಿದರು: "ಹೌದು." ಆ ವ್ಯಕ್ತಿ ಹೇಳಿದರು: "ಅಲ್ಲಾಹನಾಣೆ! ನಾನು ಅವುಗಳಿಗಿಂತ ಏನೂ ಹೆಚ್ಚಿಸುವುದಿಲ್ಲ."

34- "ಮುಅಝ್ಝಿನ್ 'ಅಲ್ಲಾಹು ಅಕ್ಬರ್ ಅಲ್ಲಾಹು ಅಕ್ಬರ್' ಎಂದು ಹೇಳುವಾಗ ನಿಮ್ಮಲ್ಲೊಬ್ಬರು ಹೃದಯಾಂತರಾಳದಿಂದ 'ಅಲ್ಲಾಹು ಅಕ್ಬರ್ ಅಲ್ಲಾಹು ಅಕ್ಬರ್' ಎಂದು ಹೇಳಿದರೆ*, ಮುಅಝ್ಝಿನ್ 'ಅಶ್‌ಹದು ಅನ್ ಲಾಇಲಾಹ ಇಲ್ಲಲ್ಲಾಹ್' ಎಂದು ಹೇಳುವಾಗ 'ಅಶ್‌ಹದು ಅನ್ ಲಾಇಲಾಹ ಇಲ್ಲಲ್ಲಾಹ್' ಎಂದು ಹೇಳಿದರೆ, ಮುಅಝ್ಝಿನ್ 'ಅಶ್‌ಹದು ಅನ್ನ ಮುಹಮ್ಮದನ್ ರಸೂಲುಲ್ಲಾಹ್' ಎಂದು ಹೇಳುವಾಗ 'ಅಶ್‌ಹದು ಅನ್ನ ಮುಹಮ್ಮದನ್ ರಸೂಲುಲ್ಲಾಹ್' ಎಂದು ಹೇಳಿದರೆ, ಮುಅಝ್ಝಿನ್ 'ಹಯ್ಯ ಅಲಸ್ಸಲಾಹ್' ಎಂದು ಹೇಳುವಾಗ 'ಲಾ ಹೌಲ ವಲಾ ಕುವ್ವತ ಇಲ್ಲಾ ಬಿಲ್ಲಾಹ್' ಎಂದು ಹೇಳಿದರೆ, ಮುಅಝ್ಝಿನ್ 'ಹಯ್ಯ ಅಲಲ್ ಫಲಾಹ್' ಎಂದು ಹೇಳುವಾಗ 'ಲಾ ಹೌಲ ವಲಾ ಕುವ್ವತ ಇಲ್ಲಾ ಬಿಲ್ಲಾಹ್' ಎಂದು ಹೇಳಿದರೆ, ಮುಅಝ್ಝಿನ್ 'ಅಲ್ಲಾಹು ಅಕ್ಬರ್ ಅಲ್ಲಾಹು ಅಕ್ಬರ್' ಎಂದು ಹೇಳುವಾಗ 'ಅಲ್ಲಾಹು ಅಕ್ಬರ್ ಅಲ್ಲಾಹು ಅಕ್ಬರ್' ಎಂದು ಹೇಳಿದರೆ, ಮುಅಝ್ಝಿನ್ 'ಲಾಇಲಾಹ ಇಲ್ಲಲ್ಲಾಹ್' ಎಂದು ಹೇಳುವಾಗ 'ಲಾಇಲಾಹ ಇಲ್ಲಲ್ಲಾಹ್' ಎಂದು ಹೇಳಿದರೆ, ಅವರು ಸ್ವರ್ಗವನ್ನು ಪ್ರವೇಶಿಸುತ್ತಾರೆ."

39- ಅಲ್ಲಾಹನ ಸಂದೇಶವಾಹಕರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಶೌರ್ಯಕ್ಕಾಗಿ ಹೋರಾಡುವ, ಕೋಮುವಾದಕ್ಕಾಗಿ ಹೋರಾಡುವ, ಮತ್ತು ತೋರಿಕೆಗಾಗಿ ಹೋರಾಡುವ ವ್ಯಕ್ತಿಯ ಬಗ್ಗೆ—ಇವರಲ್ಲಿ ಅಲ್ಲಾಹನ ಮಾರ್ಗದಲ್ಲಿರುವವರು ಯಾರು? ಎಂದು ಕೇಳಲಾಯಿತು. ಆಗ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಉತ್ತರಿಸಿದರು: @"ಅಲ್ಲಾಹನ ವಚನವು ಸರ್ವೋಚ್ಛವಾಗಬೇಕೆಂದು ಯಾರು ಹೋರಾಡುತ್ತಾರೋ ಅವರೇ ಅಲ್ಲಾಹನ ಮಾರ್ಗದಲ್ಲಿರುವವರು."

45- "ನಾನು ಪ್ರವಾದಿಯವರಿಂದ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹತ್ತು ರಕಅತ್‌ಗಳನ್ನು ಜ್ಞಾಪಕದಲ್ಲಿಟ್ಟಿದ್ದೇನೆ*: ಝುಹರ್ ನಮಾಝಿಗೆ ಮೊದಲು ಎರಡು ರಕಅತ್‌ಗಳು ಮತ್ತು ಅದರ ನಂತರ ಎರಡು ರಕಅತ್‌ಗಳು, ಮಗ್ರಿಬ್ ನಂತರ ಮನೆಯಲ್ಲಿ ಎರಡು ರಕಅತ್‌ಗಳು, ಇಶಾ ನಂತರ ಮನೆಯಲ್ಲಿ ಎರಡು ರಕಅತ್‌ಗಳು, ಫಜ್ರ್ ನಮಾಝಿಗೆ ಮೊದಲು ಎರಡು ರಕಅತ್‌ಗಳು. (ಇವು ಮಾತ್ರವಲ್ಲದೆ) ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಯಾರೂ ಹೋಗದಂತಹ ಒಂದು ಸಮಯವಿದೆ. (ಪ್ರವಾದಿ ಪತ್ನಿ) ಹಫ್ಸ ನನಗೆ ತಿಳಿಸಿದರು: ಮುಅಝ್ಝಿನ್ ಅಝಾನ್ ನೀಡಿ ಪ್ರಭಾತವು ಉದಯವಾದಾಗ ಪ್ರವಾದಿಯವರು ಎರಡು ರಕಅತ್‌ ನಮಾಝ್ ಮಾಡುತ್ತಿದ್ದರು." ಇನ್ನೊಂದು ವರದಿಯಲ್ಲಿ: "ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜುಮಾ ನಮಾಝಿನ ಬಳಿಕ ಎರಡು ರಕಅತ್‌ ನಮಾಝ್ ನಿರ್ವಹಿಸುತ್ತಿದ್ದರು."

50- ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಾಝನ್ನು ಪ್ರಾರಂಭಿಸುವಾಗ ತಮ್ಮ ಎರಡು ಕೈಗಳನ್ನು ಹೆಗಲಿಗೆ ಸಮಾನಾಂತರವಾಗಿ ಎತ್ತುತ್ತಿದ್ದರು.* ಅದೇ ರೀತಿ, ರುಕೂ ಮಾಡುವಾಗಲೂ, ರುಕೂವಿನಿಂದ ತಲೆ ಎತ್ತುವಾಗಲೂ ಕೈಗಳನ್ನು ಎತ್ತುತ್ತಿದ್ದರು ಮತ್ತು "ಸಮಿಅಲ್ಲಾಹು ಲಿಮನ್ ಹಮಿದ, ರಬ್ಬನಾ ವಲಕಲ್ ಹಮ್ದ್" ಎಂದು ಹೇಳುತ್ತಿದ್ದರು. ಆದರೆ ಸುಜೂದ್‌ನಲ್ಲಿ ಅವರು ಹೀಗೆ ಮಾಡುತ್ತಿರಲಿಲ್ಲ.

51- "ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನ್ನ ಅಂಗೈಯನ್ನು ಅವರ ಎರಡು ಅಂಗೈಗಳ ಮಧ್ಯದಲ್ಲಿಟ್ಟು, ಕುರ್‌ಆನಿನ ಒಂದು ಅಧ್ಯಾಯವನ್ನು ಕಲಿಸಿಕೊಡುವಂತೆ ನನಗೆ ತಶಹ್ಹುದ್ ಕಲಿಸಿಕೊಟ್ಟರು*: ಅತ್ತಹಿಯ್ಯಾತು ಲಿಲ್ಲಾಹಿ, ವಸ್ಸಲವಾತು, ವತ್ತಯ್ಯಿಬಾತು, ಅಸ್ಸಲಾಮು ಅಲೈಕ ಅಯ್ಯುಹನ್ನಬಿಯ್ಯು ವರಹ್ಮತುಲ್ಲಾಹಿ ವಬರಕಾತುಹು, ಅಸ್ಸಲಾಮು ಅಲೈನಾ ವಅಲಾ ಇಬಾದಿಲ್ಲಾಹಿ ಸ್ಸಾಲಿಹೀನ್. ಅಶ್‌ಹದು ಅನ್ ಲಾ ಇಲಾಹ ಇಲ್ಲಲ್ಲಾಹು ವ ಅಶ್‌ಹದು ಅನ್ನ ಮುಹಮ್ಮದನ್ ಅಬ್ದುಹೂ ವರಸೂಲುಹು." (ಅಭಿವಂದನೆಗಳು, ನಮಾಝ್‌ಗಳು ಮತ್ತು ಅತ್ಯುತ್ತಮವಾದುದೆಲ್ಲವೂ ಅಲ್ಲಾಹನಿಗೆ ಮೀಸಲು. ಓ ಪ್ರವಾದಿಯವರೇ! ನಿಮ್ಮ ಮೇಲೆ ಅಲ್ಲಾಹನ ಶಾಂತಿ, ಕರುಣೆ ಮತ್ತು ಸಮೃದ್ಧಿಯಿರಲಿ. ನಮ್ಮ ಮೇಲೆ ಮತ್ತು ಅಲ್ಲಾಹನ ನೀತಿವಂತ ದಾಸರೆಲ್ಲರ ಮೇಲೆ ಶಾಂತಿಯಿರಲಿ. ಅಲ್ಲಾಹನ ಹೊರತು ಆರಾಧಿಸಲು ಅರ್ಹರಾದ ಅನ್ಯ ದೇವರಿಲ್ಲ ಎಂದು ನಾನು ಸಾಕ್ಷ್ಯವಹಿಸುತ್ತೇನೆ ಮತ್ತು ಮುಹಮ್ಮದ್ ಅಲ್ಲಾಹನ ದಾಸರು ಮತ್ತು ಸಂದೇಶವಾಹಕರೆಂದು ನಾನು ಸಾಕ್ಷ್ಯ ವಹಿಸುತ್ತೇನೆ). ಇನ್ನೊಂದು ವರದಿಯಲ್ಲಿ: "ನಿಶ್ಚಯವಾಗಿಯೂ ಅಲ್ಲಾಹು ಶಾಂತಿಯಾಗಿದ್ದಾನೆ. ಆದ್ದರಿಂದ ನಿಮ್ಮಲ್ಲೊಬ್ಬರು ನಮಾಝಿನಲ್ಲಿ ಕುಳಿತುಕೊಳ್ಳುವಾಗ ಹೀಗೆ ಹೇಳಲಿ: ಅತ್ತಹಿಯ್ಯಾತು ಲಿಲ್ಲಾಹಿ, ವಸ್ಸಲವಾತು, ವತ್ತಯ್ಯಿಬಾತು, ಅಸ್ಸಲಾಮು ಅಲೈಕ ಅಯ್ಯುಹನ್ನಬಿಯ್ಯು ವರಹ್ಮತುಲ್ಲಾಹಿ ವಬರಕಾತುಹು, ಅಸ್ಸಲಾಮು ಅಲೈನಾ ವಅಲಾ ಇಬಾದಿಲ್ಲಾಹಿ ಸ್ಸಾಲಿಹೀನ್. (ಅಭಿವಂದನೆಗಳು, ನಮಾಝ್‌ಗಳು ಮತ್ತು ಅತ್ಯುತ್ತಮವಾದುದೆಲ್ಲವೂ ಅಲ್ಲಾಹನಿಗೆ ಮೀಸಲು. ಓ ಪ್ರವಾದಿಯವರೇ! ನಿಮ್ಮ ಮೇಲೆ ಅಲ್ಲಾಹನ ಶಾಂತಿ, ಕರುಣೆ ಮತ್ತು ಸಮೃದ್ಧಿಯಿರಲಿ. ನಮ್ಮ ಮೇಲೆ ಮತ್ತು ಅಲ್ಲಾಹನ ನೀತಿವಂತ ದಾಸರೆಲ್ಲರ ಮೇಲೆ ಶಾಂತಿಯಿರಲಿ). ಹೀಗೆ ಹೇಳಿದರೆ ಭೂಮ್ಯಾಕಾಶಗಳಲ್ಲಿರುವ ಅಲ್ಲಾಹನ ಎಲ್ಲಾ ನೀತಿವಂತ ದಾಸರಿಗೂ ಅದು ಅನ್ವಯಿಸುತ್ತದೆ. ಅಶ್‌ಹದು ಅನ್ ಲಾ ಇಲಾಹ ಇಲ್ಲಲ್ಲಾಹು ವ ಅಶ್‌ಹದು ಅನ್ನ ಮುಹಮ್ಮದನ್ ಅಬ್ದುಹೂ ವರಸೂಲುಹು. (ಅಲ್ಲಾಹನ ಹೊರತು ಆರಾಧಿಸಲು ಅರ್ಹರಾದ ಅನ್ಯ ದೇವರಿಲ್ಲ ಎಂದು ನಾನು ಸಾಕ್ಷ್ಯವಹಿಸುತ್ತೇನೆ ಮತ್ತು ಮುಹಮ್ಮದ್ ಅಲ್ಲಾಹನ ದಾಸರು ಮತ್ತು ಸಂದೇಶವಾಹಕರೆಂದು ನಾನು ಸಾಕ್ಷ್ಯ ವಹಿಸುತ್ತೇನೆ). ನಂತರ ಅವರಿಗೆ ಇಷ್ಟವಾದ ಪ್ರಾರ್ಥನೆಯನ್ನು ಪ್ರಾರ್ಥಿಸಬಹುದು."

52- ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪ್ರಾರ್ಥಿಸುತ್ತಾ ಹೇಳುತ್ತಿದ್ದರು: "@ಓ ಅಲ್ಲಾಹ್! ನಾನು ನಿನ್ನಲ್ಲಿ ಸಮಾಧಿಯ ಶಿಕ್ಷೆಯಿಂದ, ನರಕ ಶಿಕ್ಷೆಯಿಂದ, ಜೀವನ ಮತ್ತು ಮರಣದ ಪರೀಕ್ಷೆಗಳಿಂದ ಮತ್ತು ದಜ್ಜಾಲ್‌ನ ಪರೀಕ್ಷೆಯಿಂದ ರಕ್ಷೆ ಬೇಡುತ್ತೇನೆ.*" ಮುಸ್ಲಿಂರ ಇನ್ನೊಂದು ವರದಿಯಲ್ಲಿ: "ನಿಮ್ಮಲ್ಲೊಬ್ಬನು ಕೊನೆಯ ತಶಹ್ಹುದ್ ಪಠಿಸಿದ ನಂತರ ನಾಲ್ಕು ವಿಷಯಗಳಿಂದ ಅಲ್ಲಾಹನಲ್ಲಿ ರಕ್ಷೆ ಬೇಡಲಿ. ನರಕ ಶಿಕ್ಷೆಯಿಂದ, ಸಮಾಧಿಯ ಶಿಕ್ಷೆಯಿಂದ, ಜೀವನ ಮತ್ತು ಮರಣದ ಪರೀಕ್ಷೆಗಳಿಂದ ಮತ್ತು ದಜ್ಜಾಲ್‌ನ ಕೆಡುಕಿನಿಂದ."

53- ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಾಝಿಗಾಗಿ ತಕ್ಬೀರ್ ಹೇಳಿದರೆ, ಕುರ್‌ಆನ್ ಪಠಿಸುವುದಕ್ಕೆ ಮೊದಲು ಸ್ವಲ್ಪ ಹೊತ್ತು ಮೌನವಾಗಿರುತ್ತಿದ್ದರು. ನಾನು ಹೇಳಿದೆ: "ಓ ಅಲ್ಲಾಹನ ಸಂದೇಶವಾಹಕರೇ! ನನ್ನ ತಂದೆ-ತಾಯಿಗಳನ್ನು ನಿಮಗೆ ಅರ್ಪಿಸುತ್ತಿದ್ದೇನೆ. ತಕ್ಬೀರ್ ಮತ್ತು ಕುರ್‌ಆನ್ ಪಠಣದ ನಡುವೆ ನೀವು ಮೌನವಾಗಿರುತ್ತೀರಿ. ಆಗ ನೀವು ಏನು ಪಠಿಸುತ್ತೀರಿ? ಅವರು ಉತ್ತರಿಸಿದರು: "ನಾನು ಹೀಗೆ ಹೇಳುತ್ತೇನೆ: @ಓ ಅಲ್ಲಾಹ್! ಪೂರ್ವ ಮತ್ತು ಪಶ್ಚಿಮಗಳ ನಡುವೆ ಅಂತರವಿಟ್ಟಂತೆ ನನ್ನ ಮತ್ತು ನನ್ನ ಪಾಪಗಳ ನಡುವೆ ಅಂತರವಿಡು.* ಓ ಅಲ್ಲಾಹ್! ಬಿಳಿಬಟ್ಟೆಯನ್ನು ಕೊಳೆಯಿಂದ ಶುಚಿಗೊಳಿಸುವಂತೆ ನನ್ನ ಪಾಪಗಳಿಂದ ನನ್ನನ್ನು ಶುಚಿಗೊಳಿಸು. ಓ ಅಲ್ಲಾಹ್! ಮಂಜು, ನೀರು ಮತ್ತು ಹಿಮದ ಮೂಲಕ ನನ್ನ ಪಾಪಗಳಿಂದ ನನ್ನನ್ನು ತೊಳೆದುಬಿಡು."

63- ಅಮ್ರ್ ಬಿನ್ ಅಬೂ ಹಸನ್ ಅಬ್ದುಲ್ಲಾ ಬಿನ್ ಝೈದ್‌ರೊಂದಿಗೆ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ವುದೂ (ಅಂಗಸ್ನಾನ) ಬಗ್ಗೆ ವಿಚಾರಿಸುವುದನ್ನು ನೋಡಿದೆ. ಆಗ ಅಬ್ದುಲ್ಲಾ ಬಿನ್ ಝೈದ್ ನೀರಿನ ಪಾತ್ರೆಯನ್ನು ತರಿಸಿ @ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ವುದೂ ನಿರ್ವಹಿಸಿದಂತೆ ವುದೂ ನಿರ್ವಹಿಸಿ ತೋರಿಸಿದರು.* ಅವರು ಪಾತ್ರೆಯಿಂದ ತನ್ನ ಕೈಗಳಿಗೆ ನೀರನ್ನು ಸುರಿದು ಅವುಗಳನ್ನು ಮೂರು ಬಾರಿ ತೊಳೆದರು. ನಂತರ ತಮ್ಮ ಕೈಯನ್ನು ಪಾತ್ರೆಗೆ ತೂರಿಸಿ, ಬಾಯಿ ಮುಕ್ಕಳಿಸಿದರು, ನೀರನ್ನು ಮೂಗಿಗೆ ರಭಸದಿಂದ ಎಳೆದು ಹೊರಬಿಟ್ಟರು. ಅವರು ಇದನ್ನು ಮೂರು ಬಾರಿ ಮಾಡಿದರು. ನಂತರ ಕೈಯನ್ನು ಪಾತ್ರೆಗೆ ತೂರಿಸಿ ಮೂರು ಬಾರಿ ಮುಖವನ್ನು ತೊಳೆದರು. ನಂತರ ಎರಡು ಬಾರಿ ಕೈಗಳನ್ನು ಮೊಣಕೈಗಳ ತನಕ ತೊಳೆದರು. ನಂತರ ಕೈಯನ್ನು ನೀರಿಗೆ ತೂರಿಸಿ ತಲೆಯನ್ನು ಮುಂದಿನಿಂದ ಹಿಂದಕ್ಕೆ ಮತ್ತು ಹಿಂದಿನಿಂದ ಮುಂದಕ್ಕೆ ಒಂದು ಬಾರಿ ಸವರಿದರು. ನಂತರ ಹರಡುಗಂಟುಗಳ ತನಕ ಕಾಲುಗಳನ್ನು ತೊಳೆದರು.

70- "ನಿಮ್ಮಲ್ಲೊಬ್ಬನು ಮಲಗಿರುವಾಗ ಶೈತಾನನು ಅವನ ಕತ್ತಿನ ಹಿಂಭಾಗದಲ್ಲಿ ಮೂರು ಗಂಟುಗಳನ್ನು ಹಾಕಿ, ಅವುಗಳಲ್ಲಿ ಪ್ರತಿಯೊಂದು ಗಂಟಿಗೂ ಗುದ್ದುತ್ತಾ, "ರಾತ್ರಿ ಇನ್ನೂ ದೀರ್ಘವಾಗಿದೆ; ಮಲಗು" ಎನ್ನುತ್ತಿರುವನು.* ಅವನೇನಾದರೂ ಎದ್ದು ಅಲ್ಲಾಹನನ್ನು ಸ್ಮರಿಸಿದರೆ, ಒಂದು ಗಂಟು ಬಿಚ್ಚಿಹೋಗುತ್ತದೆ. ಅವನು ವುದೂ ನಿರ್ವಹಿಸಿದರೆ ಇನ್ನೊಂದು ಗಂಟು ಬಿಚ್ಚಿಹೋಗುತ್ತದೆ. ಅವನು ನಮಾಝ್ ಮಾಡಿದರೆ ಮೂರನೆಯ ಗಂಟು ಬಿಚ್ಚಿಹೋಗುತ್ತದೆ. ಆಗ ಅವನು ಉಲ್ಲಾಸದಿಂದ ಶುದ್ಧ ಮನಸ್ಸಿನೊಂದಿಗೆ ಬೆಳಗನ್ನು ಪ್ರವೇಶಿಸುತ್ತಾನೆ. ಇಲ್ಲದಿದ್ದರೆ ಅವನು ಕೆಟ್ಟ ಮನಸ್ಸಿನೊಂದಿಗೆ ಆಲಸ್ಯದಿಂದ ಬೆಳಗನ್ನು ಪ್ರವೇಶಿಸುತ್ತಾನೆ."

75- "ಒಬ್ಬ ವ್ಯಕ್ತಿ ಸಾಮೂಹಿಕವಾಗಿ (ಜಮಾಅತ್‌ನೊಂದಿಗೆ) ನಮಾಝ್ ನಿರ್ವಹಿಸುವುದು, ಆತ ತನ್ನ ಮನೆಯಲ್ಲಿ ಅಥವಾ ತನ್ನ ಮಾರುಕಟ್ಟೆಯಲ್ಲಿ ನಿರ್ವಹಿಸುವ ನಮಾಝ್‌ಗಿಂತ ಇಪ್ಪತ್ತಕ್ಕಿಂತಲೂ ಹೆಚ್ಚು ಪದವಿಗಳನ್ನು ಹೊಂದಿದೆ.* ಅದೇಕೆಂದರೆ, ಅವರಲ್ಲೊಬ್ಬನು ಅತ್ಯುತ್ತಮ ರೀತಿಯಲ್ಲಿ ವುದೂ (ಅಂಗಸ್ನಾನ) ನಿರ್ವಹಿಸಿ, ನಂತರ ಮಸೀದಿಗೆ ಹೊರಡುತ್ತಾನೆ. ನಮಾಝಿನ ಹೊರತು ಇನ್ನೇನೂ ಅವನನ್ನು (ಹೊರಡುವಂತೆ) ಪ್ರಚೋದಿಸುವುದಿಲ್ಲ. ಅವನು ನಮಾಝನ್ನಲ್ಲದೆ ಇನ್ನೇನನ್ನೂ ಉದ್ದೇಶಿಸುವುದೂ ಇಲ್ಲ. ಹಾಗಾದರೆ, ಅವನು ಮಸೀದಿಯನ್ನು ಪ್ರವೇಶಿಸುವ ತನಕ ಅವನ ಒಂದೊಂದು ಹೆಜ್ಜೆಗೂ ಅವನಿಗೆ ಒಂದೊಂದು ಪದವಿಯನ್ನು ಏರಿಸಲಾಗುತ್ತದೆ ಮತ್ತು ಅವನಿಂದ ಒಂದೊಂದು ಪಾಪವನ್ನು ಅಳಿಸಲಾಗುತ್ತದೆ. ಅವನು ಮಸೀದಿಯನ್ನು ಪ್ರವೇಶಿಸಿದ ನಂತರ, ಎಲ್ಲಿಯವರೆಗೆ ನಮಾಝ್ ಅವನನ್ನು ಅಲ್ಲಿ ತಡೆದಿರಿಸುತ್ತದೋ ಅಲ್ಲಿಯ ತನಕ ಅವನು ನಮಾಝ್ ಮಾಡುತ್ತಿದ್ದಾನೆಂದೇ ಪರಿಗಣಿಸಲಾಗುತ್ತದೆ. ನಿಮ್ಮಲ್ಲೊಬ್ಬನು ನಮಾಝ್ ಮಾಡಿದ ಸ್ಥಳದಲ್ಲೇ ಕುಳಿತಿರುವ ತನಕ ದೇವದೂತರುಗಳು, “ಓ ಅಲ್ಲಾಹ್! ಇವನಿಗೆ ದಯೆ ತೋರು! ಓ ಅಲ್ಲಾಹ್! ಇವನನ್ನು ಕ್ಷಮಿಸು! ಓ ಅಲ್ಲಾಹ್! ಇವನ ಪಶ್ಚಾತ್ತಾಪವನ್ನು ಸ್ವೀಕರಿಸು!” ಎಂದು ಅವನಿಗಾಗಿ ಪ್ರಾರ್ಥಿಸುತ್ತಲೇ ಇರುತ್ತಾರೆ. ಅವನು ಇತರರಿಗೆ ತೊಂದರೆ ಕೊಡದಿರುವ ತನಕ, ಅಥವಾ ಅವನ ವುದೂ (ಅಂಗಸ್ನಾನ) ಅಸಿಂಧುವಾಗದಿರುವ ತನಕ."

81- "ಶುಕ್ರವಾರ ದೊಡ್ಡ ಅಶುದ್ಧಿ (ಜನಾಬತ್) ಗಾಗಿರುವ ಸ್ನಾನವನ್ನು ಮಾಡಿ ನಂತರ (ಮಸೀದಿಗೆ) ಹೊರಡುವವನು, ಒಂಟೆಯನ್ನು ಬಲಿ ನೀಡಿದವನಿಗೆ ಸಮಾನನಾಗುತ್ತಾನೆ.* ಎರಡನೇ ತಾಸಿನಲ್ಲಿ ಹೊರಡುವವನು ಹಸುವನ್ನು ಬಲಿ ನೀಡಿದವನಿಗೆ ಸಮಾನನಾಗುತ್ತಾನೆ. ಮೂರನೇ ತಾಸಿನಲ್ಲಿ ಹೊರಡುವವನು ಕೊಂಬುಗಳಿರುವ ಟಗರನ್ನು ಬಲಿ ನೀಡಿದವನಿಗೆ ಸಮಾನನಾಗುತ್ತಾನೆ. ನಾಲ್ಕನೇ ತಾಸಿನಲ್ಲಿ ಹೊರಡುವವನು ಕೋಳಿಯನ್ನು ಬಲಿ ನೀಡಿದವನಿಗೆ ಸಮಾನನಾಗುತ್ತಾನೆ. ಐದನೇ ತಾಸಿನಲ್ಲಿ ಹೊರಡುವವನು ಮೊಟ್ಟೆಯನ್ನು ಬಲಿ ನೀಡಿದವನಿಗೆ ಸಮಾನನಾಗುತ್ತಾನೆ. ನಂತರ, ಇಮಾಮರು ಹೊರ ಬಂದರೆ ದೇವದೂತರುಗಳು ಪ್ರವಚನವನ್ನು ಕೇಳಲು ಹಾಜರಾಗುತ್ತಾರೆ."

91- "ಮುಅಝ್ಝಿನ್ (ಅಝಾನ್ ಕರೆ ನೀಡುವವನು) ಕರೆ ನೀಡುವುದನ್ನು ಕೇಳಿದಾಗ, ಯಾರು "ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ, ಅವನು ಏಕೈಕನು ಮತ್ತು ಸಹಭಾಗಿಗಳಿಲ್ಲದವನು, ಮತ್ತು ಮುಹಮ್ಮದ್ ಅವನ ದಾಸರು ಮತ್ತು ಸಂದೇಶವಾಹಕರು ಎಂದು ನಾನು ಸಾಕ್ಷ್ಯ ವಹಿಸುತ್ತೇನೆ, ಪರಿಪಾಲಕನಾಗಿ ಅಲ್ಲಾಹನಲ್ಲಿ, ಸಂದೇಶವಾಹಕರಾಗಿ ಮುಹಮ್ಮದ್‌ರಲ್ಲಿ ಮತ್ತು ಧರ್ಮವಾಗಿ ಇಸ್ಲಾಂನಲ್ಲಿ ನನಗೆ ತೃಪ್ತಿಯಿದೆ ಎಂದು ಹೇಳುತ್ತಾನೋ, ಅವನಿಗೆ ಅವನ ಪಾಪಗಳನ್ನು ಕ್ಷಮಿಸಲಾಗುತ್ತದೆ."

92- "ಚಿನ್ನ ಮತ್ತು ಬೆಳ್ಳಿಯನ್ನು ಹೊಂದಿರುವವನು ಅವುಗಳ ಹಕ್ಕನ್ನು (ಝಕಾತನ್ನು) ನೀಡದಿದ್ದರೆ, ಪುನರುತ್ಥಾನ ದಿನದಂದು ಅವುಗಳನ್ನು ಅಗ್ನಿಯ ಹಾಳೆಗಳಾಗಿ ಪರಿವರ್ತಿಸಿ, ನರಕಾಗ್ನಿಯಲ್ಲಿ ಅವುಗಳನ್ನು ಕಾಯಿಲಾಗುವುದು.* ನಂತರ ಅವನ ಪಾರ್ಶ್ವ, ಹಣೆ ಮತ್ತು ಬೆನ್ನುಗಳಿಗೆ ಅದರಿಂದ ಬರೆ ಹಾಕಲಾಗುವುದು. ಅವು ತಣ್ಣಗಾದಾಗಲೆಲ್ಲಾ ಅದನ್ನು ಪುನಃ ಕಾಯಿಸಲಾಗುವುದು. ಐವತ್ತು ಸಾವಿರ ವರ್ಷಗಳಷ್ಟು ದೀರ್ಘವಾದ ದಿನದಂದು ಅಲ್ಲಾಹು ಅವನ ದಾಸರ ಮಧ್ಯೆ ತೀರ್ಪು ನೀಡಿ ಮುಗಿಸುವ ತನಕ ಇದು ಮುಂದುವರಿಯುವುದು. ನಂತರ ಅವನು ಒಂದೋ ಸ್ವರ್ಗಕ್ಕೆ ಅಥವಾ ನರಕಕ್ಕೆ ಅವನ ದಾರಿಯನ್ನು ಕಂಡುಕೊಳ್ಳುವನು."

94- ಒಬ್ಬ ವ್ಯಕ್ತಿ ಅಲ್ಲಾಹನ ಸಂದೇಶವಾಹಕರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ನಾವು ಕಡಲಿನಲ್ಲಿ ಪ್ರಯಾಣ ಮಾಡುವವರು. ನಾವು ನಮ್ಮೊಂದಿಗೆ ಸ್ವಲ್ಪ ನೀರನ್ನು ಒಯ್ಯುತ್ತೇವೆ. ಆ ನೀರಿನಿಂದ ನಾವು ವುದೂ ನಿರ್ವಹಿಸಿದರೆ ನಮಗೆ ಕುಡಿಯಲು ನೀರು ಇರುವುದಿಲ್ಲ. ನಾವು ಸಮುದ್ರದ ನೀರಿನಿಂದ ವುದೂ ಮಾಡಬಹುದೇ?" ಆಗ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: @"ಅದರ ನೀರು ಶುದ್ಧವಾಗಿದೆ ಮತ್ತು ಅದರ ಶವವು ಧರ್ಮಸಮ್ಮತವಾಗಿದೆ."