ಅಕೀದಾ

ಅಕೀದಾ

6- ಓ ಬಾಲಕನೇ! ನಾನು ನಿನಗೆ ಕೆಲವು ಮಾತುಗಳನ್ನು ಕಲಿಸುತ್ತೇನೆ: ನೀನು ಅಲ್ಲಾಹನನ್ನು (ಅವನ ಆಜ್ಞೆಗಳನ್ನು) ರಕ್ಷಿಸು, ಅವನು ನಿನ್ನನ್ನು ರಕ್ಷಿಸುತ್ತಾನೆ. ನೀನು ಅಲ್ಲಾಹನನ್ನು ರಕ್ಷಿಸು, ನೀನು ಅವನನ್ನು ನಿನ್ನ ಮುಂಭಾಗದಲ್ಲಿ ಕಾಣುವೆ. ನೀನು ಕೇಳುವುದಾದರೆ, ಅಲ್ಲಾಹನಲ್ಲಿಯೇ ಕೇಳು, ಮತ್ತು ನೀನು ಸಹಾಯವನ್ನು ಕೋರುವುದಾದರೆ, ಅಲ್ಲಾಹನಲ್ಲಿಯೇ ಸಹಾಯವನ್ನು ಕೋರು

9- ನಾನು ನಿಮಗೆ ಅಲ್ಲಾಹನನ್ನು ಭಯಪಡಲು, ಮತ್ತು (ನಿಮ್ಮ ನಾಯಕನಿಗೆ) ಕಿವಿಗೊಡಲು ಹಾಗೂ ವಿಧೇಯರಾಗಿರಲು ಉಪದೇಶಿಸುತ್ತೇನೆ. ಒಬ್ಬ ಗುಲಾಮನನ್ನು ನಿಮ್ಮ ಮೇಲೆ ನಾಯಕನಾಗಿ ನಿಯೋಜಿಸಲ್ಪಟ್ಟರೂ ಸಹ. ಏಕೆಂದರೆ, ಖಂಡಿತವಾಗಿಯೂ ನನ್ನ ನಂತರ ನಿಮ್ಮಲ್ಲಿ ಯಾರು ಬದುಕಿರುತ್ತಾರೋ, ಅವರು ಬಹಳಷ್ಟು ಭಿನ್ನಾಭಿಪ್ರಾಯಗಳನ್ನು ಕಾಣುವರು. ಆದ್ದರಿಂದ, ನೀವು ನನ್ನ ಸುನ್ನತ್ ಮತ್ತು ನನ್ನ ನಂತರ ಬರುವ ಸನ್ಮಾರ್ಗ ಪಡೆದ, ಸರಿಯಾಗಿ ಮಾರ್ಗದರ್ಶಿಸಲ್ಪಟ್ಟ ಖಲೀಫರ ಸುನ್ನತ್‌ಗೆ ಬದ್ಧರಾಗಿರಿ

35- ನಿಶ್ಚಯವಾಗಿಯೂ ಅಲ್ಲಾಹು ಒಳಿತು ಮತ್ತು ಕೆಡುಕುಗಳನ್ನು ದಾಖಲಿಸಿದನು. ನಂತರ ಅವುಗಳನ್ನು (ಹೀಗೆ) ವಿವರಿಸಿದನು: ಒಬ್ಬ ವ್ಯಕ್ತಿ ಒಂದು ಒಳಿತನ್ನು ಮಾಡಲು ಉದ್ದೇಶಿಸಿ ಅದನ್ನು ಮಾಡದಿದ್ದರೆ ಅಲ್ಲಾಹು ಅವನ ಹೆಸರಲ್ಲಿ ಒಂದು ಪೂರ್ಣ ಒಳಿತನ್ನು ದಾಖಲಿಸುವನು. ಅವನು ಒಂದು ಒಳಿತನ್ನು ಮಾಡಲು ಉದ್ದೇಶಿಸಿ ಅದನ್ನು ಮಾಡಿದರೆ, ಅಲ್ಲಾಹು ಅದರ ಪ್ರತಿಫಲವನ್ನು ಹತ್ತರಿಂದ ಏಳು ನೂರರವರೆಗೆ ಇಮ್ಮಡಿಗೊಳಿಸಿ, ಅಥವಾ ಅದಕ್ಕಿಂತಲೂ ಹೆಚ್ಚು ಪ್ರತಿಫಲವನ್ನು ದಾಖಲಿಸುವನು. ಒಬ್ಬ ವ್ಯಕ್ತಿ ಒಂದು ಕೆಡುಕನ್ನು ಮಾಡಲು ಉದ್ದೇಶಿಸಿ ಅದನ್ನು ಮಾಡದಿದ್ದರೆ ಅಲ್ಲಾಹು ಅವನ ಹೆಸರಲ್ಲಿ ಒಂದು ಪೂರ್ಣ ಒಳಿತನ್ನು ದಾಖಲಿಸುವನು. ಅವನು ಒಂದು ಕೆಡುಕನ್ನು ಮಾಡಲು ಉದ್ದೇಶಿಸಿ ಅದನ್ನು ಮಾಡಿದರೆ ಅಲ್ಲಾಹು ಅವನ ಹೆಸರಲ್ಲಿ ಒಂದು ಕೆಡುಕನ್ನು ಮಾತ್ರ ದಾಖಲಿಸುವನು

37- ಇಸ್ಲಾಮ್ ಎಂದರೆ ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ ಮತ್ತು ಮುಹಮ್ಮದ್ ಅಲ್ಲಾಹನ ಸಂದೇಶವಾಹಕರು ಎಂದು ಸಾಕ್ಷ್ಯವಹಿಸುವುದು, ನಮಾಝ್ ಸಂಸ್ಥಾಪಿಸುವುದು, ಝಕಾತ್ ನೀಡುವುದು, ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸುವುದು ಮತ್ತು ಕಅಬಾಲಯಕ್ಕೆ ತಲುಪುವ ಸಾಮರ್ಥ್ಯವಿದ್ದರೆ ಕಅಬಾಲಯಕ್ಕೆ ಹಜ್ಜ್ ನಿರ್ವಹಿಸುವುದು

40- ಮಗೂ! ನಾನು ನಿನಗೆ ಕೆಲವು ವಚನಗಳನ್ನು ಕಲಿಸುತ್ತೇನೆ. ಅಲ್ಲಾಹನ ಸಂರಕ್ಷಣೆ ಮಾಡು, ಅವನು ನಿನ್ನ ಸಂರಕ್ಷಣೆ ಮಾಡುವನು. ಅಲ್ಲಾಹನ ಸಂರಕ್ಷಣೆ ಮಾಡು, ಆಗ ನೀನು ಅವನನ್ನು ನಿನ್ನ ಮುಂಭಾಗದಲ್ಲಿ ಕಾಣಬಹುದು. ನೀನು ಬೇಡುವುದಾದರೆ ಅಲ್ಲಾಹನಲ್ಲಿ ಬೇಡು. ನೀನು ಸಹಾಯ ಯಾಚಿಸುವುದಾದರೆ, ಅಲ್ಲಾಹನಲ್ಲಿ ಸಹಾಯ ಯಾಚಿಸು

90- ನಾವು ಹೇಳಿದೆವು: "ನೀವು ನಮ್ಮ ಯಜಮಾನರು." ಆಗ ಅವರು ಹೇಳಿದರು: "ಯಜಮಾನ ಅಲ್ಲಾಹನಾಗಿದ್ದಾನೆ." ನಾವು ಹೇಳಿದೆವು: "ನೀವು ಶ್ರೇಷ್ಠತೆಯಲ್ಲಿ ನಮ್ಮ ಪೈಕಿ ಅತ್ಯುತ್ತಮರು ಮತ್ತು ನೀಳದಲ್ಲಿ (ಗೌರವದಲ್ಲಿ) ನಮ್ಮ ಪೈಕಿ ಅತಿಶ್ರೇಷ್ಠರು." ಅವರು ಹೇಳಿದರು: "ನಿಮಗೆ ಹೇಳಲಿರುವುದನ್ನು ಅಥವಾ ನಿಮಗೆ ಹೇಳಲಿರುವ ಕೆಲವನ್ನು ಹೇಳಿರಿ. ಆದರೆ ಶೈತಾನನು ನಿಮ್ಮನ್ನು ಎಳೆದೊಯ್ಯಲು ಬಿಡಬೇಡಿ

94- ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅನ್ಸಾರ್‌ಗಳ ಬಗ್ಗೆ ಹೇಳಿದರು: "ಸತ್ಯವಿಶ್ವಾಸಿಯ ಹೊರತು ಇನ್ನಾರೂ ಅವರನ್ನು ಪ್ರೀತಿಸುವುದಿಲ್ಲ ಮತ್ತು ಕಪಟವಿಶ್ವಾಸಿಯ ಹೊರತು ಇನ್ನಾರೂ ಅವರನ್ನು ದ್ವೇಷಿಸುವುದಿಲ್ಲ. ಯಾರು ಅವರನ್ನು ಪ್ರೀತಿಸುತ್ತಾನೋ ಅವನನ್ನು ಅಲ್ಲಾಹು ಪ್ರೀತಿಸುತ್ತಾನೆ ಮತ್ತು ಯಾರು ಅವರನ್ನು ದ್ವೇಷಿಸುತ್ತಾನೋ ಅವನನ್ನು ಅಲ್ಲಾಹು ದ್ವೇಷಿಸುತ್ತಾನೆ

95- ಸರಿಯಾದ ಮಾರ್ಗವನ್ನು ಅನುಸರಿಸಿ ಮತ್ತು ಸಾಧ್ಯವಾದಷ್ಟು ಹತ್ತಿರವಾಗಿರಿ, ಮತ್ತು ನಿಮ್ಮಲ್ಲಿ ಯಾರೂ ತಮ್ಮ ಕರ್ಮಗಳಿಂದಾಗಿ ಮೋಕ್ಷ ಪಡೆಯುವುದಿಲ್ಲ ಎಂಬುದನ್ನು ನೆನಪಿನಲ್ಲಿಡಿ." ಅವರು (ಅನುಯಾಯಿಗಳು) ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ನೀವು ಕೂಡ ಪಡೆಯುವುದಿಲ್ಲವೇ?" ಅವರು ಉತ್ತರಿಸಿದರು: "ನಾನೂ ಕೂಡ ಪಡೆಯುವುದಿಲ್ಲ, ಅಲ್ಲಾಹು ತನ್ನ ಕರುಣೆ ಮತ್ತು ಅನುಗ್ರಹದಿಂದ ನನ್ನನ್ನು ಆವರಿಸಿಕೊಳ್ಳುವ ಹೊರತು