إعدادات العرض
1- ಅಶಾಂತಿಯ ಸಮಯದಲ್ಲಿ ಆರಾಧನೆ ಮಾಡುವುದು ಎಂದರೆ ನನ್ನ ಬಳಿಗೆ ಹಿಜ್ರ (ವಲಸೆ) ಮಾಡಿದಂತೆ
2- ಯಾವುದೇ ಮುಸ್ಲಿಂ ಅಲ್ಲಾಹನಲ್ಲಿ ಪಾಪ ಅಥವಾ ರಕ್ತ ಸಂಬಂಧವನ್ನು ಮುರಿಯುವುದನ್ನು ಒಳಗೊಂಡಿರದ ಪ್ರಾರ್ಥನೆಯೊಂದಿಗೆ ಪ್ರಾರ್ಥಿಸಿದರೆ, ಅಲ್ಲಾಹು ಅವನಿಗೆ ಮೂರರಲ್ಲಿ ಒಂದನ್ನು ನೀಡದೇ ಇರುವುದಿಲ್ಲ: ಒಂದೋ ಅವನ ಪ್ರಾರ್ಥನೆಗೆ ಶೀಘ್ರದಲ್ಲೇ ಉತ್ತರಿಸುತ್ತಾನೆ, ಅಥವಾ ಅವನು ಅದನ್ನು ಪರಲೋಕದಲ್ಲಿ ಅವನಿಗಾಗಿ ಉಳಿಸುತ್ತಾನೆ, ಅಥವಾ ಅವನು ಅದಕ್ಕೆ ಸಮಾನವಾದ ಒಂದು ಕೆಡುಕನ್ನು ಅವನಿಂದ ನಿವಾರಿಸುತ್ತಾನೆ." ಸಹಚರರು ಹೇಳಿದರು: "ಹಾಗಾದರೆ ನಾವು ಹೆಚ್ಚಿಸಬೇಕು." ಪ್ರವಾದಿಯವರು ಹೇಳಿದರು: "ಅಲ್ಲಾಹು ಕೂಡ ಹೆಚ್ಚಿಸುವನು
3- ಅಲ್ಲಾಹನ ಪ್ರವಾದಿಯು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಂಕಷ್ಟದ ಸಮಯದಲ್ಲಿ ಹೀಗೆ ಹೇಳುತ್ತಿದ್ದರು: "ಅಲ್ಲಾಹನ ಹೊರತು ಆರಾಧನೆಗೆ ಅರ್ಹವಾದ ಬೇರೆ ದೇವರಿಲ್ಲ, ಅವನು ಪರಮ ಶ್ರೇಷ್ಠನು ಮತ್ತು ಸಹನಶೀಲನು. ಅಲ್ಲಾಹನ ಹೊರತು ಆರಾಧನೆಗೆ ಅರ್ಹವಾದ ಬೇರೆ ದೇವರಿಲ್ಲ, ಅವನು ಭವ್ಯ ಸಿಂಹಾಸನದ ಒಡೆಯನು. ಅಲ್ಲಾಹನ ಹೊರತು ಆರಾಧನೆಗೆ ಅರ್ಹವಾದ ಬೇರೆ ದೇವರಿಲ್ಲ, ಅವನು ಆಕಾಶಗಳ ಒಡೆಯನು, ಭೂಮಿಯ ಒಡೆಯನು ಮತ್ತು ಉದಾತ್ತ ಅರ್ಶ್ (ಸಿಂಹಾಸನ) ನ ಒಡೆಯನು
4- ನಿಮ್ಮಲ್ಲಿ ಯಾರಾದರೂ ಆಕಳಿಸಿದರೆ, ಅವನು ತನ್ನ ಕೈಯನ್ನು ಬಾಯಿಯ ಮೇಲೆ ಇಟ್ಟುಕೊಳ್ಳಲಿ. ಏಕೆಂದರೆ ಖಂಡಿತವಾಗಿಯೂ ಶೈತಾನನು ಪ್ರವೇಶಿಸುತ್ತಾನೆ
5- ಒಬ್ಬ ಮುಸ್ಲಿಮನಿಗೆ ಇನ್ನೊಬ್ಬ ಮುಸ್ಲಿಮನ ಮೇಲೆ ಆರು ಹಕ್ಕುಗಳಿವೆ." ಓ ಅಲ್ಲಾಹನ ಸಂದೇಶವಾಹಕರೇ! ಅವು ಯಾವುವು ಎಂದು ಕೇಳಲಾಯಿತು. ಅವರು ಉತ್ತರಿಸಿದರು: "ನೀನು ಅವನನ್ನು ಭೇಟಿಯಾದರೆ, ಅವನಿಗೆ ಸಲಾಂ ಹೇಳುವುದು; ಅವನು ನಿನ್ನನ್ನು ಆಹ್ವಾನಿಸಿದರೆ, ಅವನ ಆಹ್ವಾನವನ್ನು ಸ್ವೀಕರಿಸುವುದು; ಅವನು ನಿನ್ನಲ್ಲಿ ಸಲಹೆ ಕೇಳಿದರೆ, ಅವನಿಗೆ ಸಲಹೆ ನೀಡುವುದು; ಅವನು ಸೀನಿದ ನಂತರ ಅಲ್ಲಾಹನನ್ನು ಸ್ತುತಿಸಿದರೆ, ಅವನಿಗೆ ತಸ್ಮೀತ್ ಮಾಡುವುದು; ಅವನು ಅನಾರೋಗ್ಯಕ್ಕೆ ಒಳಗಾದಾಗ, ಅವನನ್ನು ಸಂದರ್ಶಿಸುವುದು; ಮತ್ತು ಅವನು ನಿಧನನಾದರೆ ಅವನ ಮೃತದೇಹವನ್ನು ಹಿಂಬಾಲಿಸುವುದು
6- ಯಾರು ಅಹಂಕಾರದಿಂದ ತನ್ನ ಉಡುಪನ್ನು (ನೆಲದಲ್ಲಿ) ಎಳೆಯುತ್ತಾನೋ ಅವನ ಕಡೆಗೆ ಅಲ್ಲಾಹು ನೋಡುವುದಿಲ್ಲ