ಅಂತ್ಯದಿನದಲ್ಲಿ ವಿಶ್ವಾಸವಿಡುವುದು

ಅಂತ್ಯದಿನದಲ್ಲಿ ವಿಶ್ವಾಸವಿಡುವುದು

15- ಪುನರುತ್ಥಾನ ದಿನದಂದು ದಾಸನೊಂದಿಗೆ, ಅವನ ಆಯುಷ್ಯದ ಬಗ್ಗೆ—ಅವನು ಅದನ್ನು ಹೇಗೆ ವ್ಯಯಿಸಿದನೆಂದು, ಅವನ ಜ್ಞಾನದ ಬಗ್ಗೆ—ಅವನು ಅದರ ಪ್ರಕಾರ ಏನು ಕಾರ್ಯವೆಸಗಿದನೆಂದು, ಅವನ ಸಂಪತ್ತಿನ ಬಗ್ಗೆ—ಅವನು ಅದನ್ನು ಎಲ್ಲಿಂದ ಸಂಪಾದಿಸಿದನು ಮತ್ತು ಯಾವುದಕ್ಕೆ ಖರ್ಚು ಮಾಡಿದನೆಂದು, ಮತ್ತು ಅವನ ದೇಹದ ಬಗ್ಗೆ—ಅವನು ಅದನ್ನು ಯಾವುದಕ್ಕಾಗಿ ವಿನಿಯೋಗಿಸಿದನೆಂದು ಕೇಳುವ ತನಕ ಅವನ ಎರಡು ಪಾದಗಳು ಅಲುಗಾಡುವುದಿಲ್ಲ

23- ನನ್ನ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ಮರ್ಯಮರ ಪುತ್ರ (ಈಸಾ) ಶೀಘ್ರದಲ್ಲೇ ನಿಮ್ಮ ನಡುವೆ ನ್ಯಾಯಯುತ ಆಡಳಿತಗಾರನಾಗಿ ಇಳಿದು ಬರುವರು. ಅವರು ಶಿಲುಬೆಯನ್ನು ಒಡೆಯುವರು, ಹಂದಿಯನ್ನು ಕೊಲ್ಲುವರು ಮತ್ತು ಜಿಝ್ಯವನ್ನು (ಮುಸ್ಲಿಮೇತರರ ಮೇಲಿನ ತೆರಿಗೆ) ರದ್ದುಗೊಳಿಸುವರು. ಆಗ ಸಂಪತ್ತು ಎಷ್ಟರ ಮಟ್ಟಿಗೆ ಹೇರಳವಾಗುತ್ತದೆಯೆಂದರೆ ಅದನ್ನು ಸ್ವೀಕರಿಸಲು ಯಾರೂ ಮುಂದೆ ಬರುವುದಿಲ್ಲ

32- ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ)—ಅವರು ಸತ್ಯವಂತರು ಮತ್ತು ಸತ್ಯವಂತರೆಂದು ಅಂಗೀಕರಿಸಲ್ಪಟ್ಟವರು—ತಿಳಿಸಿದರು: ನಿಶ್ಚಯವಾಗಿಯೂ, ನಿಮ್ಮಲ್ಲಿ ಪ್ರತಿಯೊಬ್ಬನ ಸೃಷ್ಟಿಯನ್ನು ಅವನ ತಾಯಿಯ ಉದರದಲ್ಲಿ ನಲ್ವತ್ತು ದಿನ-ರಾತ್ರಿಗಳ ಕಾಲ 'ನುತ್ಫ'ದ (ವೀರ್ಯದ) ರೂಪದಲ್ಲಿ ಜೋಡಿಸಿಡಲಾಗುತ್ತದೆ