إعدادات العرض
ಪುನರುತ್ಥಾನ ದಿನದಂದು ಸತ್ಯವಿಶ್ವಾಸಿಯ ತಕ್ಕಡಿಯಲ್ಲಿ ಉತ್ತಮ ಗುಣಕ್ಕಿಂತಲೂ ಹೆಚ್ಚು ಭಾರವಿರುವ ಯಾವುದೇ ವಸ್ತುವಿಲ್ಲ. ಅಶ್ಲೀಲ…
ಪುನರುತ್ಥಾನ ದಿನದಂದು ಸತ್ಯವಿಶ್ವಾಸಿಯ ತಕ್ಕಡಿಯಲ್ಲಿ ಉತ್ತಮ ಗುಣಕ್ಕಿಂತಲೂ ಹೆಚ್ಚು ಭಾರವಿರುವ ಯಾವುದೇ ವಸ್ತುವಿಲ್ಲ. ಅಶ್ಲೀಲ ಮತ್ತು ಅಸಭ್ಯವಾಗಿ ಮಾತನಾಡುವವರನ್ನು ಅಲ್ಲಾಹು ದ್ವೇಷಿಸುತ್ತಾನೆ
ಅಬೂ ದರ್ದಾಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಪುನರುತ್ಥಾನ ದಿನದಂದು ಸತ್ಯವಿಶ್ವಾಸಿಯ ತಕ್ಕಡಿಯಲ್ಲಿ ಉತ್ತಮ ಗುಣಕ್ಕಿಂತಲೂ ಹೆಚ್ಚು ಭಾರವಿರುವ ಯಾವುದೇ ವಸ್ತುವಿಲ್ಲ. ಅಶ್ಲೀಲ ಮತ್ತು ಅಸಭ್ಯವಾಗಿ ಮಾತನಾಡುವವರನ್ನು ಅಲ್ಲಾಹು ದ್ವೇಷಿಸುತ್ತಾನೆ."
[صحيح] [رواه أبو داود والترمذي]
الترجمة
العربية Bosanski English Español فارسی Français Bahasa Indonesia Русский Türkçe اردو 中文 हिन्दी Hausa Kurdî Português සිංහල Svenska ગુજરાતી Yorùbá ئۇيغۇرچە Tiếng Việt Kiswahili پښتو অসমীয়া دری Кыргызча or नेपाली Čeština Oromoo Română Nederlands Soomaali తెలుగు മലയാളം Српски Kinyarwanda Lietuvių Wolof Українська ქართული Moore Magyar Shqip Македонски Azərbaycan Malagasyالشرح
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ಪುನರುತ್ಥಾನ ದಿನದಂದು ಸತ್ಯವಿಶ್ವಾಸಿಯ ತಕ್ಕಡಿಯಲ್ಲಿ ಕರ್ಮಗಳು ಮತ್ತು ಮಾತುಗಳ ಪೈಕಿ ಅತ್ಯಂತ ಹೆಚ್ಚು ಭಾರವಿರುವ ವಸ್ತು ಉತ್ತಮ ನಡವಳಿಕೆಯಾಗಿದೆ. ಮಂದಹಾಸ ಬೀರುವುದು, ತೊಂದರೆ ನೀಡದಿರುವುದು ಮತ್ತು ಒಳಿತು ಮಾಡುವುದು ಇದರಲ್ಲಿ ಒಳಪಡುತ್ತವೆ. ಮಾತಿನಲ್ಲಿ ಮತ್ತು ಕ್ರಿಯೆಯಲ್ಲಿ ದುರ್ವರ್ತನೆ ತೋರುವವನನ್ನು ಮತ್ತು ಅಸಭ್ಯವಾಗಿ ಮಾತನಾಡುವವನನ್ನು ಅಲ್ಲಾಹು ದ್ವೇಷಿಸುತ್ತಾನೆ.فوائد الحديث
ಉತ್ತಮ ನಡವಳಿಕೆಯ ಶ್ರೇಷ್ಠತೆಯನ್ನು ತಿಳಿಸಲಾಗಿದೆ. ಏಕೆಂದರೆ ಅದರಿಂದ ಅಲ್ಲಾಹನ ಪ್ರೀತಿ ಮತ್ತು ಮನುಷ್ಯರ ಪ್ರೀತಿ ಸಹ ದೊರೆಯುತ್ತದೆ. ಅದು ಪುನರುತ್ಥಾನ ದಿನದಂದು ತಕ್ಕಡಿಯಲ್ಲಿ ಅತ್ಯಧಿಕ ಭಾರ ತೂಗುವ ವಸ್ತುವಾಗಿದೆ.