ಈ ದಿನಗಳ ಹೊರತು ಅಲ್ಲಾಹನಿಗೆ ಸತ್ಕರ್ಮಗಳು ಹೆಚ್ಚು ಇಷ್ಟವಾಗುವ ಬೇರೆ ದಿನಗಳಿಲ್ಲ." ಅಂದರೆ, ದುಲ್‌ಹಿಜ್ಜ ತಿಂಗಳ ಮೊದಲ ಹತ್ತು ದಿನಗಳು

ಈ ದಿನಗಳ ಹೊರತು ಅಲ್ಲಾಹನಿಗೆ ಸತ್ಕರ್ಮಗಳು ಹೆಚ್ಚು ಇಷ್ಟವಾಗುವ ಬೇರೆ ದಿನಗಳಿಲ್ಲ." ಅಂದರೆ, ದುಲ್‌ಹಿಜ್ಜ ತಿಂಗಳ ಮೊದಲ ಹತ್ತು ದಿನಗಳು

ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಈ ದಿನಗಳ ಹೊರತು ಅಲ್ಲಾಹನಿಗೆ ಸತ್ಕರ್ಮಗಳು ಹೆಚ್ಚು ಇಷ್ಟವಾಗುವ ಬೇರೆ ದಿನಗಳಿಲ್ಲ." ಅಂದರೆ, ದುಲ್‌ಹಿಜ್ಜ ತಿಂಗಳ ಮೊದಲ ಹತ್ತು ದಿನಗಳು. ಅವರು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಅಲ್ಲಾಹನ ಮಾರ್ಗದಲ್ಲಿ ಮಾಡುವ ಜಿಹಾದ್ ಕೂಡ (ಅವನಿಗೆ ಇಷ್ಟವಿಲ್ಲವೇ)?" ಅವರು ಹೇಳಿದರು: "ಅಲ್ಲಾಹನ ಮಾರ್ಗದಲ್ಲಿ ಮಾಡುವ ಜಿಹಾದ್ ಕೂಡ (ಅವನಿಗೆ ಇಷ್ಟವಿಲ್ಲ). ಆದರೆ ಒಬ್ಬ ವ್ಯಕ್ತಿ ತನ್ನ ದೇಹ ಮತ್ತು ಆಸ್ತಿಯೊಂದಿಗೆ ರಣರಂಗಕ್ಕೆ ಹೊರಟು ಎರಡನ್ನೂ ಅಲ್ಲೇ ತ್ಯಜಿಸಿ ಬರುವ ಹೊರತು."

[Sahih/Authentic.] [Al-Bukhari]

الشرح

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ದುಲ್-ಹಿಜ್ಜ ತಿಂಗಳ ಮೊದಲ ಹತ್ತು ದಿನಗಳಲ್ಲಿ ಮಾಡುವ ಸತ್ಕರ್ಮಗಳು ವರ್ಷದ ಇತರ ದಿನಗಳಲ್ಲಿ ಮಾಡುವ ಸತ್ಕರ್ಮಗಳಿಗಿಂತಲೂ ಶ್ರೇಷ್ಠವಾಗಿದೆ. ಆಗ ಸಹಾಬಿಗಳು (ಸಂಗಡಿಗರು) (ಅವರೆಲ್ಲರ ಬಗ್ಗೆ ಅಲ್ಲಾಹು ಸಂಪ್ರೀತನಾಗಲಿ) ಇತರ ದಿನಗಳಲ್ಲಿ ಮಾಡುವ ಜಿಹಾದ್‌ನ ಬಗ್ಗೆ, ಅದು ಈ ದಿನಗಳಲ್ಲಿ ಮಾಡುವ ಸತ್ಕರ್ಮಗಳಿಗಿಂತಲೂ ಶ್ರೇಷ್ಠವಲ್ಲವೇ? ಎಂದು ಕೇಳಿದರು. ಏಕೆಂದರೆ ಅವರ ದೃಷ್ಟಿಕೋನದಲ್ಲಿ ಜಿಹಾದ್ ಅತಿ ಶ್ರೇಷ್ಠ ಸತ್ಕರ್ಮವಾಗಿತ್ತು. ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಉತ್ತರಿಸಿದರು: ಇತರ ದಿನಗಳಲ್ಲಿ ಮಾಡುವ ಜಿಹಾದ್‌ಗಿಂತಲೂ ಈ ದಿನಗಳಲ್ಲಿ ಮಾಡುವ ಸತ್ಕರ್ಮಗಳು ಶ್ರೇಷ್ಠವಾಗಿವೆ. ಆದರೆ ಒಬ್ಬ ವ್ಯಕ್ತಿ ತನ್ನ ದೇಹ ಮತ್ತು ಆಸ್ತಿಯನ್ನು ಪಣವಾಗಿಟ್ಟು ಅಲ್ಲಾಹನ ಮಾರ್ಗದಲ್ಲಿ ಜಿಹಾದ್ ಮಾಡಲು ಹೊರಟು, ನಂತರ ಅಲ್ಲಾಹನ ಮಾರ್ಗದಲ್ಲಿ ತನ್ನ ಆಸ್ತಿಯನ್ನು ಹಾಗೂ ಆತ್ಮವನ್ನು ಕಳಕೊಳ್ಳುವುದರ ಹೊರತು. ಇದು ಈ ಶ್ರೇಷ್ಠ ದಿನಗಳಲ್ಲಿ ಮಾಡುವ ಸತ್ಕರ್ಮಗಳಿಗಿಂತಲೂ ಹೆಚ್ಚು ಶ್ರೇಷ್ಠವಾಗಿದೆ.

فوائد الحديث

ದುಲ್‌ಹಿಜ್ಜ ತಿಂಗಳ ಮೊದಲ ಹತ್ತು ದಿನಗಳಲ್ಲಿ ಮಾಡುವ ಸತ್ಕರ್ಮಗಳ ಶ್ರೇಷ್ಠತೆಯನ್ನು ಈ ಹದೀಸ್ ತಿಳಿಸುತ್ತದೆ. ಆದ್ದರಿಂದ ಮುಸಲ್ಮಾನರು ಈ ದಿನಗಳನ್ನು ಸದುಪಯೋಗಪಡಿಸಬೇಕು ಮತ್ತು ಈ ದಿನಗಳಲ್ಲಿ ಅಲ್ಲಾಹನನ್ನು ಸ್ಮರಿಸುವುದು, ಕುರ್‌ಆನ್ ಪಠಿಸುವುದು, ತಕ್ಬೀರ್, ತಹ್ಲೀಲ್ ಮತ್ತು ತಹ್ಮೀದ್‌ಗಳನ್ನು ಹೇಳುವುದು, ನಮಾಝ್ ಮತ್ತು ದಾನ ಧರ್ಮ ಮಾಡುವುದು, ಉಪವಾಸ ಆಚರಿಸುವುದು ಮುಂತಾದ ಎಲ್ಲಾ ರೀತಿಯ ಸತ್ಕರ್ಮಗಳನ್ನು ಹೆಚ್ಚಿಸಬೇಕು.